ಕುಂದಾಪುರ: ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಡೆದಿದೆ.
ಪ್ರಸಾದ್ ಜೋಗಿ ಇವರ ಮನೆ ಹಾನಿಯಾಗಿದೆ. ಮನೆಯು ಸಂಪೂರ್ಣ ಕುಸಿಯುವ ಹಂತದಲ್ಲಿದ್ದು, ಬಹಳಷ್ಟು ಹಾನಿಯಾಗಿ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪ್ರಸಾದ್ ಜೋಗಿ ಅವರು ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಎಂಬ ಖ್ಯಾತಿ ಪಡೆದಿದ್ದರು.
ಮೊದಲು ಮನೆಯ ಹಿಂದಿನ ಗೋಡೆ ಒಳ ಛಾವಣಿಯ ಮಾಡು ಹಾಗೂ ಗೋಡೆಗಳು ಕುಸಿಯುವ ಸದ್ದಿಗೆ ಮನೆಯವರಿಗೆ ಎಚ್ಚರವಾದ್ದರಿಂದ ಅದೃಷ್ಟವಶಾತ್ ಮನೆಯವರೆಲ್ಲರೂ ಜೀವ ಹಾನಿಯಿಂದ ಪಾರಾಗಿದ್ದಾರೆ…ಬೆಳೆ ಬಾಳು ವಸ್ತುಗಳು ಸಂಪೂರ್ಣ ಹಾಳಾಗಿದೆ. ಬಡ ಕಲಾವಿದನ ಮನೆಯ ದುರಸ್ತಿಗೆ ನಾವೆಲ್ಲರೂ ಕೈಜೋಡಿಸಿ ಮುಂದಿನ ಈ ಬಡ ಕುಟುಂಬಕ್ಕೆ ಸಹಾಯವಾಗಿ ನಿಲ್ಲೋಣ
ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಪಂಚಾಯತ್ PDO, ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆಯನ್ನು ನೀಡಿದರು.