Monday, March 17, 2025
Homeಉಡುಪಿಕುಂದಾಪುರ ಮೂಲದ ಯುವಕ ದುಬೈನಲ್ಲಿ ಬಿಸಿಲಿನ ಝಳ ತಾಳಲಾರದೆ ನಿಧನ

ಕುಂದಾಪುರ ಮೂಲದ ಯುವಕ ದುಬೈನಲ್ಲಿ ಬಿಸಿಲಿನ ಝಳ ತಾಳಲಾರದೆ ನಿಧನ

ಉಡುಪಿ: ದುಬೈನಲ್ಲಿ ವಾಸವಾಗಿದ್ದ ಕುಂದಾಪುರ ಮೂಲದ ಯುವಕನೊಬ್ಬ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾನೆ. ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್‌ ಡಿಸೋಜಾ (19) ಮೃತ ದುರ್ದೈವಿ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್‌ ಅಲ್‌ ಖೈಮಾದ ಸೈಂಟ್‌ ಮೆರೀಸ್‌ ಚರ್ಚ್‌ ಬಳಿಯ ಮನೆಯೊಂದರಲ್ಲಿ ವಾಸವಾಗಿದ್ದ ಶಾನ್‌ ಡಿಸೋಜ, ಖಾಸಗಿ ಕಂಪೆನಿಯಲ್ಲಿ ಮ್ಯಾನೆಜರ್‌ ಆಗಿದ್ದ. ಶಾನ್ ಅಲ್ಲಿಯೇ ಕಾಲೇಜು ವಿದ್ಯಾಭ್ಯಾಸ ಕೂಡ ಮಾಡುತ್ತಿದ್ದ. ಆದರೆ ಬಿಸಿಲಿನ ತಾಪಕ್ಕೆ ಮೂರ್ಚೆ ಹೋಗಿ ಆರ್‌ಎಕೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತಪಟ್ಟಿದ್ದಾನೆ. ಶಾನ್‌ ಡಿಸೋಜಾ ತಂದೆ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾನೆ.

RELATED ARTICLES
- Advertisment -
Google search engine

Most Popular