Saturday, June 14, 2025
Homeಅಪಘಾತಮಣಿಪಾಲ | ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಮಣಿಪಾಲ | ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಮಣಿಪಾಲ: ನಿರ್ಮಾಣ ಹಂತದ ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾರ್ಮಿಕರೊಬ್ಬರು ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮಣಿಪಾಲದ ಈಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

ಕುಕ್ಕೆಹಳ್ಳಿ ಗ್ರಾಮದ 50 ವರ್ಷದ ರಘುರಾಮ ಕುಲಾಲ್ ಮೃತ ದುರ್ದೈವಿ. ಈಶ್ವರನಗರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ರಘುರಾಮ್ ಮಹಡಿಯ ಹೊರಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ಬಕೆಟ್ ತರಲು ಕಟ್ಟಡದ ಹೊರಮೈಯ ಪ್ಯಾರಪೀಟ್ ಮೇಲೆ ಕಾಲು ಇಟ್ಟಿದ್ದರು. ಈ ವೇಳೆ ಕಾಲು ಜಾರಿ ಅವರು ಕೆಳಗೆ ಬಿದ್ದರು ಎಂದು ಹೇಳಲಾಗಿದೆ.

ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ಈ ಸೈಟ್ ನಲ್ಲಿ ಹತ್ತು ಮಂದಿ ಕೆಲಸ ಮಾಡುತ್ತಿದ್ದು, ರಘುರಾಮ್ ಅವರ ಸಹೋದರನೂ ಇಲ್ಲಿ ಕೆಲಸ ಮಾಡುತ್ತಿದ್ದರು. ಕಟ್ಟಡದ ಮಾಲಕ ಗಣೇಶ್ ಮತ್ತು ಗುತ್ತಿಗೆದಾರ ಅಮರೇಶ ಗಾರೆ ಕೆಲಸ ಮಾಡುವ ವೇಳೆ ಮುನ್ನೆಚ್ಚರಿಕೆ ವಹಿಸಿಲ್ಲ ಎನ್ನಲಾಗಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

RELATED ARTICLES
- Advertisment -
Google search engine

Most Popular