ಚಿಕ್ಕಮಗಳೂರು: ಸತತ ಮಳೆಯಿಂದಾಗಿ ಅಲ್ಲಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿಯ ಗ್ರಾಮವೊಂದರಲ್ಲಿ ಲಾರಿಯೊಂದು 50 ಅಡಿ ಆಳದ ಪ್ರಪಾತಕ್ಕೆ ಬಿದ್ದಿದ್ದು, ಚಾಲಕ ಪವಾಡಸದೃಶ ಪಾರಾಗಿದ್ದಾನೆ.
ಘಟನೆಯಲ್ಲಿ ಲಾರಿ ಸಂಪೂರ್ಣ ಜಖಂಗೊಂಡಿದೆ. ಶೃಂಗೇರಿ ನೆಮ್ಮಾರು ಬಳಿ ಈ ದುರಂತ ಸಂಭವಿಸಿದೆ. ಸದ್ಯ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 50 ಅಡಿ ಆಳಕ್ಕೆ ಲಾರಿ ಬಿದ್ದಿದ್ದು, ಅದನ್ನು ಮೇಲೆತ್ತುವ ಪ್ರಯತ್ನ ನಡೆದಿದೆ.