ಕಾರ್ಕಳ: ಇಲ್ಲಿನ ನಿಟ್ಟೆ ಗ್ರಾಮದಲ್ಲಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು 26 ವರ್ಷದ ನರಿಯಪ್ಪ ಮತ್ತ್ಉ 22 ವರ್ಷದ ಮರಿಯಪ್ಪ ಎಂದು ಗುರುತಿಸಲಾಗಿದೆ.
ನಿಟ್ಟೆ ಬಳಿಯ ಮರಿಪರಪು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಲ್ಲು ತುಂಬಿಕೊಂಡು ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ್. ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.