ಮದ್ದಡ್ಕ : ನಿಯಂತ್ರಣ ತಪ್ಪಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ..!

0
38

ಪಡಂಗಡಿ : ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ದೇರಮಾರ್ ಎಂಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ನಿಯಂತ್ರಣ ತಪ್ಪಿ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಶುಕ್ರವಾರ (ಜೂನ್ 26) ಬೆಳಿಗ್ಗೆ ಸಂಭವಿಸಿದೆ.

ಮರಳು ಸಾಗಿಸುತ್ತಿದ್ದ ಟಿಪ್ಪರ್ ರಸ್ತೆ ಬದಿಯ ಮಣ್ಣಿನ ಭಾಗದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಅಪಘಾತದ ವೇಳೆ ವಾಹನಕ್ಕೆ ಹಾನಿಯಾಗಿದೆ.

ಅದೃಷ್ಟವಶಾತ್, ಟಿಪ್ಪರ್ ಚಾಲಕ ಯಾವುದೇ ಗಂಭೀರ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಯಲ್ಲಿ ಜೀವಹಾನಿ ಸಂಭವಿಸಿಲ್ಲ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಅಪಘಾತದಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಅಪಘಾತದ ನಿಖರ ಕಾರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here