ಮಹಾವೀರ ಜಯಂತಿ ರಜೆ – ದಿನಾಂಕ ಬದಲಾವಣೆ

0
150

ಮಾರ್ಚ್ 30ಕ್ಕೆ ಸಾರ್ವಜನಿಕ ರಜೆ…!

ರಾಜ್ಯದಲ್ಲಿ ಈ ಬಾರಿ ಭಗವಾನ್ ಶ್ರೀ ಮಹಾವೀರ ಜಯಂತಿಯ ಸಾರ್ವತ್ರಿಕ ರಜೆಯನ್ನು ನಿಗದಿಪಡಿಸಿದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಕ್ಯಾಲೆಂಡರ್ ಪ್ರಕಾರ ಮಾರ್ಚ್ 31, 2026 ರಂದು ನಿಗದಿಯಾಗಿದ್ದ ರಜೆಯನ್ನು ಮಾರ್ಚ್ 30, 2026 ಕ್ಕೆ ಬದಲಾಯಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸರ್ಕಾರಕ್ಕೆ ಬರೆದಿರುವ ಪತ್ರದ ಪ್ರಕಾರ, ಈ ಕೆಳಗಿನ ಕಾರಣಗಳಿಂದಾಗಿ ದಿನಾಂಕ ಬದಲಾವಣೆಗೆ ಶಿಫಾರಸು ಮಾಡಲಾಗಿದೆ:

ಜ್ಯೋತಿಷ್ಯ ಶಾಸ್ತ್ರದ ಅನ್ವಯ: ಜ್ಯೋತಿಷ್ಯ ಶಾಸ್ತ್ರ ಹಾಗೂ ಆಗಮ ಪಂಡಿತರ ಅಭಿಪ್ರಾಯದಂತೆ, ಜೈನ ಸಂಪ್ರದಾಯದಲ್ಲಿ ಸೂರ್ಯೋದಯ ಕಾಲದ ತಿಥಿಯನ್ನು ಪ್ರಧಾನವಾಗಿ ಪರಿಗಣಿಸಲಾಗುತ್ತದೆ.

ಚೈತ್ರ ಶುಕ್ಲ ತ್ರಯೋದಶಿ ತಿಥಿಯು ಮಾರ್ಚ್ 30ರ ಬೆಳಿಗ್ಗೆಯೇ ಪ್ರಾರಂಭವಾಗುತ್ತದೆ. ಜೈನ ಧರ್ಮದ ಪದ್ಧತಿಯಂತೆ ಅಂದು ಮಹಾವೀರ ಜಯಂತಿಯನ್ನು ಆಚರಿಸುವುದು ಹೆಚ್ಚು ಸೂಕ್ತ ಎಂದು ಪಂಡಿತರು ತಿಳಿಸಿದ್ದಾರೆ.

ಜೈನ ಸಮುದಾಯದ ಮುಖಂಡರು ಹಾಗೂ ಜ್ಯೋತಿಷಿಗಳು ತಮ್ಮ ಸಂಪ್ರದಾಯದಂತೆ ಮಾರ್ಚ್ 30ರಂದೇ ಜಯಂತಿ ಆಚರಿಸುತ್ತಿರುವುದರಿಂದ, ಅಂದೇ ಸರ್ಕಾರಿ ರಜೆ ಘೋಷಿಸಬೇಕೆಂದು ಕೋರಿದ್ದರು.

ಈಗಾಗಲೇ ಧಾರ್ಮಿಕ ದತ್ತಿ ಇಲಾಖೆಯು ಈ ಕುರಿತು ಸ್ಪಷ್ಟವಾದ ವರದಿಯನ್ನು ಸಿದ್ಧಪಡಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ರಾಜ್ಯ ಶಿಷ್ಟಾಚಾರ ವಿಭಾಗಕ್ಕೆ ಸಲ್ಲಿಸಿದೆ. ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಲ್ಲಿ, ಮಾರ್ಚ್ 31ರ ಬದಲಿಗೆ ಮಾರ್ಚ್ 30ರ ಸೋಮವಾರದಂದು ಸಾರ್ವತ್ರಿಕ ರಜೆ ಜಾರಿಗೆ ಬರಲಿದೆ.

LEAVE A REPLY

Please enter your comment!
Please enter your name here