ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತನೊಬ್ಬ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.
ಹತ್ತು ದಿನಗಳ ಹಿಂದೆಯಷ್ಟೇ ವಿವಾಹಿತರಾಗಿದ್ದ ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ 34ರ ಹರೆಯದ ಸೋಮಸುಂದರ್ ಮೃತ ದುರ್ದೈವಿ. ಸುಬ್ರಹ್ಮಣ್ಯ ಪರಿಸರದಲ್ಲಿ ಶುಕ್ರವಾರ ಸಂಜೆ ಮಳೆ ಆರಂಭಕ್ಕೂ ಮುನ್ನಾ ಗಾಳಿ, ಗುಡುಗು ಆರಂಭಗೊಂಡಿತ್ತು. ಈ ವೇಳೆ ಮನೆಯಂಗಳದಲ್ಲಿ ಸೋಮಸುಂದರ್ ಒಣಗಿಸಲು ಹಾಕಿದ್ದ ಅಡಿಕೆ ರಾಶಿ ಮಾಡುತ್ತಿದ್ದರು. ಸಿಡಿಲು ಬಡಿದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಸುಬ್ರಹ್ಮಣ್ಯ ಸಮೀಪ ಕಾರು ವಾಷಿಂಗ್ ಉದ್ಯಮ ನಡೆಸುತ್ತಿದ್ದ ಸೋಮಸುಂದರ್, 10 ದಿನಗಳ ಹಿಂದೆಯಷ್ಟೇ ವಿವಾಹವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.