Monday, January 13, 2025
Homeಬೆಂಗಳೂರುಮಾಂಸದ ಅಂಗಡಿಯಲ್ಲಿ ಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ

ಮಾಂಸದ ಅಂಗಡಿಯಲ್ಲಿ ಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ

ಬೆಂಗಳೂರು: ಮಚ್ಚಿನಿಂದ ತಲೆಗೆ ಹೊಡೆದು ವ್ಯಕ್ತಿಯನ್ನು ಹತ್ಯೆಗೈದಿರುವ ಘಟನೆ ನಗರದ ಬೇಗೂರಿನ ಮಾಂಸದ ಅಂಗಡಿಯೊಂದರಲ್ಲಿ ನಡೆದಿದೆ.
ಅಫ್ಸರ್ (45) ಕೊಲೆಯಾದ ವ್ಯಕ್ತಿ. ಅಫ್ಸರ್ ಬೆಂಗಳೂರಿನ ಶಿವಾಜಿನಗರ ನಿವಾಸಿಯಾಗಿದ್ದ. ಕಳೆದ 8 ತಿಂಗಳ ಹಿಂದೆ ಅಕ್ಬರ್ ಹಾಗೂ ಅಫ್ಸರ್ ಅಂಗಡಿ ಶುರು ಮಾಡಿದ್ದರು. ಆದರೆ ಅಂಗಡಿಯಲ್ಲಿ ವ್ಯಾಪಾರ ಸರಿಯಾಗಿ ಆಗುತ್ತಿರಲಿಲ್ಲ. ಇದರಿಂದ ಪ್ರತ್ಯೇಕ ಅಂಗಡಿ ತೆರೆಯಲು ಅಕ್ಬರ್ ನಿರ್ಧರಿಸಿದ್ದ. ಬಂಡವಾಳದ ಹಣ ವಾಪಸ್ ನೀಡುವಂತೆ ಅಫ್ಸರ್‌ನನ್ನು ಕೇಳಿದ್ದ. ಅಫ್ಸರ್ ಸುಮಾರು 3 ಲಕ್ಷ ರೂ. ವಾಪಸ್ ನೀಡಿದ್ದ. ಆದರೆ ಬಾಕಿ 20 ಸಾವಿರ ರೂ. ಕೊಡುವಂತೆ ಅಕ್ಬರ್ ಒತ್ತಾಯಿಸಿದ್ದ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ.
ಗಲಾಟೆ ವೇಳೆ ಇಬ್ಬರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಈ ವೇಳೆ ಅಕ್ಬರ್ ಅಂಗಡಿಯಲ್ಲಿದ್ದ ಮಚ್ಚಿನಿಂದಲೇ ಅಫ್ಸರ್ ತಲೆಗೆ ಹೊಡೆದಿದ್ದ. ಇದರಿಂದ ತೀವ್ರ ರಕ್ತಸ್ರಾವವಾಗಿ ಅಫ್ಸರ್ ಅಂಗಡಿಯಲ್ಲೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು, ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿ ಅಕ್ಬರ್‌ನನ್ನು ಬಂಧಿಸಿ, ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

RELATED ARTICLES
- Advertisment -
Google search engine

Most Popular