Tuesday, May 13, 2025
Homeಮಂಗಳೂರುಮಂಗಳೂರು: ಮೈತ್ರಿಗೆ ವಿರೋಧ; ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಮೈತ್ರಿಗೆ ವಿರೋಧ; ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆ ಜೆಡಿಎಸ್ ನ 42 ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಮುಖಂಡರು ಸೇರ್ಪಡೆಯಾದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಪಕ್ಷದ ಬಾವುಟ ನೀಡಿ ಜೆಡಿಎಸ್ ಮುಖಂಡರನ್ನು ಸ್ವಾಗತಿಸಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಈ ವೇಳೆ ಸೊರಕೆ ಕರೆ ನೀಡಿದರು. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಪಕ್ಷ ಸೇರ್ಪಡೆ ನಡೆಯಲಿದೆ ಎಂದರು.

RELATED ARTICLES
- Advertisment -
Google search engine

Most Popular