ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಫೆಬ್ರವರಿ 9ರಿಂದ ಯೋಗಾಸನ ಶಿಬಿರ ನಡೆಯಲಿದೆ. ಸಂಜೆ 5.00ರಿಂದ 6.30ರವರೆಗೆ ಶಿಬಿರ ಆಯೋಜಿಸಲಾಗಿದೆ. ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು ಯೋಗಾಸನಗಳು, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ ಹಾಗೂ ಧ್ಯಾನ ಮಾಡುವ ವಿಧಾನಗಳ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.
ಶಿಬಿರದಲ್ಲಿ ಭಾಗವಹಿಸಲು ಆಸಕ್ತರು ಆಶ್ರಮದ ಕಾರ್ಯಾಲಯದಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ 2414412 ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
