ಉಡುಪಿ:ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ನವಮಂಗಳೂರು ಬಂದರು ಪ್ರಾಧಿಕಾರ ಮಂಗಳೂರು ಇವರು ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಾರ್ವಜನಿಕರಲ್ಲಿ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯ ಕುರಿತು ಜಾಗೃತಿ ಮೂಡಿಸಲು ಮಣಿಪಾಲ್ ಸ್ಯಾಂಡ್ಹಾರ್ಟ್ನ ಕಲಾವಿದರಾದ ಶ್ರೀನಾಥ್ ಮಣಿಪಾಲ್, ರವಿ, ಪುರಂದರ್ ಇವರು ಪಣಂಬೂರು ಸಮುದ್ರ ಕಿನಾರೆಯಲ್ಲಿ ಬೃಹತ್ ‘ಮರಳು ಶಿಲ್ಪ’ ರಚಿಸಿದರು.

