ಮಂಗಳೂರು: ಜ. 3-01ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಮೇರಿಹಿಲ್, ಮಂಗಳೂರು ಇಲ್ಲಿ ಮಂಗಳೂರು ಘಟಕದ ಗೃಹರಕ್ಷಕಿ ಜಯಂತಿ ಅವರನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ ಚೂಂತಾರು ಇವರು ಸನ್ಮಾನಿಸಿದ್ದಾರೆ.
ಜಯಂತಿ ಅವರು ಅ. 16ರ 2018ರಲ್ಲಿ ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸುಮಾರು 6 ವರ್ಷಗಳಿಂದ ನಿಷ್ಕಾಮ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದೊಂದಿಗೆ ಗೃಹರಕ್ಷಕ ಇಲಾಖೆಗೆ ಸೇರಿದ ಬಳಿಕ ಹಬ್ಬ ಹರಿದಿನಗಳಲ್ಲಿ ಕಾನೂನು ಪಾಲನೆ, ಚುನಾವಣೆ ಬಂದೋಬಸ್ತ್ ಕರ್ತವ್ಯ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಂತಿ, ಸಮಾದೇಷ್ಟರಿಗೆ ಹಾಗೂ ಗೃಹರಕ್ಷಕರಿಗೆ ಧನ್ಯವಾದ ತಿಳಿಸಿದರು.
ಸಮಾದೇಷ್ಟರಾದ ಡಾ. ಮುರಲೀ ಮೋಹನ ಚೂಂತಾರು ಮಾತನಾಡಿ, ಇಲಾಖೆಯ ಘನತೆ ಗೌರವವನ್ನು ಎತ್ತಿ ಹಿಡಿಯಿರಿ ಹಾಗೂ ಉತ್ತಮ ಕರ್ತವ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ., ಮೂಡುಬಿದಿರೆ ಘಟಕದ ಪ್ರಭಾರ ಘಟಕಾಧಿಕಾರಿ ಚಂದ್ರಶೇಖರ್, ಉಳ್ಳಾಲ ಘಟಕದ ಗೃಹರಕ್ಷಕ ಸಂತೋಷ್, ಸಂಜಯ್ ಶೆಣೈ, ಸುಲೋಚನಾ, ಖತೀಜಮ್ಮ, ಮುಂತಾದವರು ಉಪಸ್ಥಿತರಿದ್ದರು.