ಕುಂದಾಪುರ: ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ.
ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ., ಡಾ. ಚಂದ್ರಶೇಖರ್ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ, ರಾಮೋಜಿಗೌಡ ಅವರನ್ನು ನೇಮಿಸಲಾಗಿದೆ.

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ ಭಂಡಾರಿಯವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ ಅಮೀನ್, ಸರ್ವ ಕಾಲೇಜ್ ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಅವರು ಶುಭಕೋರಿದ್ದಾರೆ.

