ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸುದೀರ್ಘ ವಿಚಾರಣೆ ಬಳಿಕ ಚಿನ್ನಯ್ಯನನ್ನು ಬಂಧಿಸಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಈತನನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ಇಷ್ಟು ದಿನ ಮಾಸ್ಕ್ ಹಾಕಿಕೊಂಡು ಕಾಣಿಸಿಕೊಳ್ತಿದ್ದ ಚಿನ್ನಯ್ಯ ಮಾಸ್ಕ್ ತೆರೆದು ನ್ಯಾಯಾಧೀಶರ ಮುಂದೆ ಬಂದಿದ್ದ. ಈತನನ್ನು 10 ದಿನಗಳ ಕಾಲ SIT ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಚಿನ್ನಯ್ಯ 10 ದಿನ ಎಸ್ಐಟಿ ಕಸ್ಟಡಿಗೆ
ಹಲವು ವರ್ಷಗಳ ಹಿಂದೆ ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಮುಖವಾಡ ಇದೀಗ ಕಳಚಿ ಬಿದ್ದಿದೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇದೇ ವೇಳೆ 10 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಲು ಎಸ್ಐಟಿ ಮನವಿ ಮಾಡಿತ್ತು.
ಕೋರ್ಟ್ನಿಂದ ಹೊರ ಬಂದ ಚಿನ್ನಯ್ಯ!
ಎಸ್ಐಟಿ ಮನವಿಯಂತೆ ನ್ಯಾಯಾಧೀಶರು ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಚಿನ್ನಯ್ಯನನ್ನು ಎಸ್ಐಟಿ ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ಮಾಸ್ಕ್ ಮ್ಯಾನ್ ಹಿಂದಿರುವ ನಿಗೂಢ ಕೈವಾಡಗಳು ಕೂಡ ಬಯಲಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

