ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ-ರಾಜೇಶ್ ಬಿ

0
17

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್  ತಿಳಿಸಿದ್ದಾರೆ. ಅವರು ವನಮಹೋತ್ಸವ ಮತ್ತು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ,ದ.ಕ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ )ಯಲ್ಲಿ 50 ಗಿಡಗಳನ್ನು ನೆಡುವೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಜಾಗತಿಕ ತಾಪಮಾನ ಏರಿಕೆ,ಹವಾಮಾನದ ವೈಪರೀತ್ಯಗಳು ಸೇರಿದಂತೆ ಪರಿಸರದಲ್ಲಿನ ಸವಾಲುಗಳಿಗೆ  ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಸಮಾಜದಲ್ಲಿ ಸಾಮಾಜಿಕವಾಗಿ ಜಾಗೃತಿ ಮೂಡಿಸಬೇಕಾಗಿದೆ. ಮಂಗಳೂರು ನಗರದಲ್ಲಿ 25 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸ ಲಾಗುತ್ತಿದೆ. ಈಗಾಗಲೇ ಸುಮಾರು 9000 ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ. ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವ ದ ಅಗತ್ಯವಿದೆ ಎಂದು ರಾಜೇಶ್ ತಿಳಿಸಿದ್ದಾರೆ.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ,ಅರಣ್ಯ ಇಲಾಖೆಯ ಮೂಲಕ ಒದಗಿಸಲಾದ ಗಿಡಗಳನ್ನು ನೆಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಸುರತ್ಕಲ್  ಅರಣ್ಯವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್ , ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ  ಉಪಾಧ್ಯಕ್ಷ ಭಾಸ್ಕರ ರೈಕಟ್ಟಾ,ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ  ರಾಜೇಶ್ ದಡ್ಡಂಗಡಿ,ಕೋಡಿಕೆರೆ ಎಸ್ ಟಿ ಪಿ ಗುತ್ತಿಗೆದಾರ ಶಾಂತರಾಜು ಮೊದಲಾದವರು
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here