Tuesday, March 18, 2025
Homeಧಾರ್ಮಿಕಶ್ರೀ ಗಾಯಿತ್ರಿ ಪರಿವಾರದ ಆಶ್ರಯದಲ್ಲಿ ದವನದ ಹುಣ್ಣಿಮೆ ಅಂಗವಾಗಿ ಏ.23 ರಂದು ಸಾಮೂಹಿಕ ಶ್ರೀ ಗಾಯತ್ರಿ...

ಶ್ರೀ ಗಾಯಿತ್ರಿ ಪರಿವಾರದ ಆಶ್ರಯದಲ್ಲಿ ದವನದ ಹುಣ್ಣಿಮೆ ಅಂಗವಾಗಿ ಏ.23 ರಂದು ಸಾಮೂಹಿಕ ಶ್ರೀ ಗಾಯತ್ರಿ ಪೂಜೆ

ದಾವಣಗೆರೆ: ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ದವನದ ಹುಣ್ಣಿಮೆ ಅಂಗವಾಗಿ ದಿನಾಂಕ 23-04-2024 ರಂದು ಮಂಗಳವಾರ ಬೆಳಿಗ್ಗೆ 7-೦೦ಕ್ಕೆ ನಡೆಯಲಿದೆ ಎಂದು ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ ನಗರದ ಜಯದೇವ ವೃತ್ತದಲ್ಲಿರುವ ಶ್ರೀ
ಶಂಕರಮಠದಲ್ಲಿ ನಡೆಯಲಿರುವ ಈ ಅಪ್ಪಟ ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರು ಕೀರ್ತಿಶೇಷ ಪ್ರೇಮ್ ಜಿ. ಪಟೇಲ್ ಇವರ ಪುತ್ರ ದಾಮೋದರ ಪಟೇಲ್ ಮತ್ತು ಕುಟುಂಬದವರು ಕಳೆದ ಇಪ್ಪತ್ತಮೂರು ವರ್ಷ ಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆ ಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ
ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular