ಮೇ 29ರಂದು ಮೂಡುಬಿದಿರೆಯಲ್ಲಿ ರೈತರ ಬೇಡಿಕೆ ಈಡೇರಿಸಲು ಬೃಹತ್ ಪ್ರತಿಭಟನಾ ಜಾಥಾ

0
16

ಮೂಡುಬಿದಿರೆ : ಹೈನುಗಾರಿಕೆ ಮತ್ತು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 29ರಂದು ಮೂಡುಬಿದಿರೆಯಲ್ಲಿ ಬೃಹತ್ ರೈತ ಪ್ರತಿಭಟನಾ ಜಾಥಾ ನಡೆಯಲಿದೆ ಎಂದು ಭಾರತೀಯ ಕಿಸಾನ್ ಸಂಘದ ಮುಖಂಡ Joyses D’Souza ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿ ಲೀಟರ್ ಹಾಲಿಗೆ ₹65 ಮೂಲ ಬೆಲೆ ನಿಗದಿಪಡಿಸಬೇಕು, ₹15 ಪ್ರೋತ್ಸಾಹಧನ ನೀಡಬೇಕು ಹಾಗೂ ಅಕ್ರಮ-ಸಕ್ರಮ ಕಾಯ್ದೆಯನ್ನು ಸರಳೀಕರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಅಲ್ಲದೆ ಡೀಮ್ ಫಾರೆಸ್ಟ್ ಪ್ರದೇಶದಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಭೂಮಿ ಮಂಜೂರು ಮಾಡಬೇಕು ಹಾಗೂ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಅಡಿಕೆ, ತೆಂಗು ಮತ್ತು ರಬ್ಬರ್ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.

ಮೇ 29ರಂದು ಬೆಳಿಗ್ಗೆ 10 ಗಂಟೆಗೆ ಮೂಡುಬಿದಿರೆಯ ಶಾಸಕರ ಕಚೇರಿ ಬಳಿಯಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಯಲಿದ್ದು, ರೈತ ಹೋರಾಟಗಾರ Shanthi Prasad Hegde ಭಾಗವಹಿಸಿ ಮಾತನಾಡಲಿದ್ದಾರೆ.

LEAVE A REPLY

Please enter your comment!
Please enter your name here