Saturday, June 14, 2025
Homeಉಡುಪಿಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ಪೂರ್ಣಗೊಳಿಸಲು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಹೆಜಮಾಡಿ ಮೀನುಗಾರಿಕಾ ಬಂದರು ಕಾಮಗಾರಿ ಪೂರ್ಣಗೊಳಿಸಲು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

ಉಡುಪಿ ಜಿಲ್ಲೆ ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ 2021-22 ಸಾಲಿನಲ್ಲಿ 180 ಕೋಟಿ ಮಂಜುರಾಗಿದ್ದು ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಮತ್ತು ಸುತ್ತಮುತ್ತಲಿನ ಮೀನುಗಾರರಿಗೆ ತೊಂದರೆ ಆಗುತ್ತಿದ್ದು ಮೀನುಗಾರಿಕಾ ದೋಣಿ ತಂಗುದಾಣಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿ ಹೆಜಮಾಡಿ ಬಂದರಿನ ಕಾಮಗಾರಿಯನ್ನು ಕೂಡಲೆ ಕೈಗೊಳ್ಳಬೇಕಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮೀನುಗಾರಿಕಾ ಮುಖ್ಯ ಕಾರ್ಯದರ್ಶಿಗಳಾದ ಅಜಯ್ ನಾಗಭೂಷಣ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಮೀನುಗಾರಿಕಾ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರು ಕೂಡಲೇ ಕಾಮಗಾರಿಗೆಯನ್ನು ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular