ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50 ವಷಗಳ ನೆನಪಿಗಾಗಿ ಪೊಡವಿಗೊಡೆಯ ಶ್ರೀ ಕೃಷ್ಣ ದೇವರಿಗೆ ಸಮರ್ಪಿಸಲಿರುವ ಪಾರ್ಥಸಾರಥಿ ಸುವರ್ಣ ರಥದ ಶೋಭಾ ಯಾತ್ರೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಮಂತ್ರಾಲಯದ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು, ವಿವಿಧ ಸಾಂಸ್ಕೃತಿಕ ತಂಡಗಳು, ಭಜನಾ ತಂಡಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಶೋಭಾಯಾತ್ರೆಯಲ್ಲಿ ಉಪಸ್ಥಿತರಿದ್ದರು.

