ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್ (ರಿ)ನ 2024-25ನೇ ಸಾಲಿನ ಅಧ್ಯಕ್ಷರಾಗಿ ಬಿ. ಸೀತಾರಾಮ ಆಚಾರ್ಯ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಪ್ರಸನ್ನ ಹೆಗ್ಡೆ, ಕೋಶಾಧಿಕಾರಿಯಾಗಿ ಎಂ ಗಣೇಶ್ ಕಾಮತ್, ಉಪಾಧ್ಯಕ್ಷರಾಗಿ ಹರೀಶ್ ಕೆ. ಆದೂರು, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ ಮೂಡುಬಿದಿರೆ, ನವೀನ್ ಸಾಲ್ಯಾನ್, ಬಿ.ಕೆ. ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು, ಯಶೋಧರ ವಿ. ಬಂಗೇರಾ, ಪುನೀತ್, ಜೈಸನ್ ತಾಕೊಡೆ, ಶರತ್ ದೇವಾಡಿಗ ಆಯ್ಕೆಯಾಗಿದ್ದಾರೆ.