ವರದಿ ರಾಯಿ ರಾಜ ಕುಮಾರ
ಮೂಡುಬಿದಿರೆ: ಶಾಲೆಯಲ್ಲಿ ವಿದ್ಯಾರ್ಥಿಗಳು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವಂತರಾಗಬೇಕು. ಉತ್ತಮ ವಿದ್ಯಾರ್ಥಿಗಳಾಗಬೇಕು ಎಂದು ಜೈನ್ ಮೆಡಿಕಲ್ ಸೆಂಟರ್ ನ ಅಧ್ಯಕ್ಷ ಡಾ. ಮಹಾವೀರ ಜೈನ್ ಕ್ರೀಡೋತ್ಸವ ಉದ್ಘಾಟಿಸಿ ಶುಭ ಹಾರೈಸಿದರು.

ಪವರ ಫ್ರೆಂಡ್ಸ ಮೂಡುಬಿದಿರೆಯ ಅಧ್ಯಕ್ಷ ಜಯಪ್ರಕಾಶ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಸಂಚಾಲಕರಾದ ರಾಮನಾಥ ಭಟ್ ಧ್ವಜಾರೋಹಣ ಮಾಡಿ ಸ್ವಾಗತಿಸಿದರು. ಅಧ್ಯಾಪಕರಾದ ಭರತ್ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಾಪಿಕೆ ಶ್ರೀಮತಿ ಅಶ್ವಿನಿ ಧನ್ಯವಾದ ಸಮರ್ಪಿಸಿದರು.

