ಕಲಬುರಗಿ: ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಲೇ ಇದೆ. ಇಂದು ಬಿಸಿಲಿನ ತಾಪಕ್ಕೆ ಸಂಸದ ಡಾ. ಉಮೇಶ್ ಜಾಧವ್ ಕುಸಿದು ಬಿದ್ದಿರುವ ಘಟನೆ ನಡೆದಿದೆ.
ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಇಲ್ಲಿಗೆ ಜಾಧವ್ ಭೇಟಿ ನೀಡಿದ್ದರು. ಇದೇ ಸಂದರ್ಭ ಬಿಸಿಲಿನ ತಾಪಕ್ಕೆ ರಸ್ತೆಯಲ್ಲೇ ಅವರು ಕುಸಿದು ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಕ್ಕೂ ಮೊದಲು ಜಾಧವ್ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.