ಬಜಗೋಳಿ ಶ್ರೀ ಆದಿಶಕ್ತಿ ಧರ್ಮದೇವಿ ದೇವಸ್ಥಾನ ಶ್ರೀ ಕ್ಷೇತ್ರ ಕೊಪ್ಪಲ ಮುಡಾರಿನಲ್ಲಿ ಜನವರಿ 15 2026ನೇ ಗುರುವಾರ ಮಕರ ಸಂಕ್ರಾಂತಿಯ ಪ್ರಯುಕ್ತ 20ನೇ ವರ್ಷದ ಚಂಡಿಕಾ ಹೋಮ ನಡೆಯಲಿದೆ.
ಬೆಳಿಗ್ಗೆ ಗಂಟೆ 7-00ಕ್ಕೆ ದೇವತಾ ಪ್ರಾರ್ಥನೆ, ಗಣಹೋಮ, ಪೂರ್ವಾಹ್ನ ಗಂಟೆ 11-00ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12-00ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 1-00ರಿಂದ ಅನ್ನಸಂತರ್ಪಣೆ ನಡೆಯಲಿರುವುದು.

