ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ವಿಜೃಂಭಣೆಯ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ

0
84

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶನಿವಾರ ಸಿಂಹ ಸಂಕ್ರಮಣದಂದು ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮಕ್ಕೆ
ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ಸಾಮೂಹಿಕ ಪ್ರಾರ್ಥನೆ ನಡೆಸಿದರು. ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ಶ್ರೀನಿವಾಸ್ ಭಟ್ ಪರೆಂಕಿಲ, ವಿಷ್ಣುಮೂರ್ತಿ ಭಟ್, ಕ್ಷೇತ್ರದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ, ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ ಕೋಟ್ಯಾನ್,ಸದಸ್ಯೆ ಪದ್ಮಿನಿ ವಿಜಯಕುಮಾರ್ ಶೆಟ್ಟಿ,ಮಾಜೀ ಜಿ. ಪಂ.ಸದಸ್ಯೆ ಕಸ್ತೂರಿ ಪಂಜ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರೂಪಾ ವಿಷ್ಣುಮೂರ್ತಿ ಭಟ್, ನಂದನಾ ಶೆಟ್ಟಿ ಕುಬೆವೂರು, ಶಶಿಕಲಾ ಎನ್ ಕುಂದರ್, ಶಾಂತರಾಮ ಶೆಟ್ಟಿ ತೆಂಗಾಳಿ, ಅರುಣ್ ಕುಮಾರ್, ಮಾಜೀ ಸದಸ್ಯ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಉದ್ಯಮಿ ಸುಂದರ ಶೆಟ್ಟಿ,ಮೋಹನದಾಸ ಶೆಟ್ಟಿ,ಸತೀಶ್ ಶೆಟ್ಟಿ, ಶ್ರೀಕಾಂತ್ ಶೆಟ್ಟಿ, ಕೆಂಚನಕೆರೆ, ಉದಯಕುಮಾರ್ ಶೆಟ್ಟಿ ಅಧಿಧನ್ , ಸುಧೀರ್ ಶೆಟ್ಟಿ, ಶರತ್ ಕುಬೆವೂರು, ಬಾಲಕೃಷ್ಣ ಶೆಟ್ಟಿ ಅಂಬೆಲಬೀಡು, ಜಯ ಕುಮಾರ್ ಕುಬೆವೂರು, ಶ್ರೀ ಆದಿ ಜನಾರ್ದನ ಯುವಕ ಮಂಡಲ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here