ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವದ ಪ್ರಯುಕ್ತ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ , ದೀಪ ಪ್ರಜ್ವಲನೆ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಲಕ್ಷ ಕುಂಕುಮಾರ್ಚನೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾರ್ವಜನಿಕ ಶನಿ ಪೂಜೆ ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು
ರಾತ್ರಿ ದೀಪೋತ್ಸವ ಹಾಗೂ ಶ್ರೀ ದೇವರ ಉತ್ಸವ ಬಲಿ ನಡೆಯಿತು
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಗೋಪಾಲಕೃಷ್ಣ ಉಪಾಧ್ಯಾಯ
ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು , ಅಕೌಂಟೆಟ್ ಶಿವಶಂಕರ್ ಭಕ್ತಾದಿಗಳು ಉಪಸ್ಥಿತರಿದ್ದ
ಮುಲ್ಕಿ: ಬಪ್ಪನಾಡು ದೇವಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ
RELATED ARTICLES