ವರದಿ ರಾಯಿ ರಾಜಕುಮಾರ
ಮುಲ್ಕಿ ಮೂಡುಬಿದರೆ ಕ್ಷೇತ್ರದ ವಿವಿಧ ಮಂಡಲಗಳ ಕೇಂದ್ರಗಳ ತರಬೇತಿ ಕಾರ್ಯಗಾರ ಕಾಮಧೇನು ಸಭಾಭವನದಲ್ಲಿ ಅಕ್ಟೋಬರ್ 29 ರಂದು ನಡೆಯಿತು. ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಕೋಟ್ಯಾನ್, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಾರ್ಯದರ್ಶಿ ರಂಜಿತ್ ಪೂಜಾರಿ, ಮುಂದಾಳುಗಳಾದ ಸುನಿಲ್ ಆಳ್ವ, ಶಾಂತಿಪ್ರಸಾದ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರದ ಪ್ರಮುಖರುಗಳು, ಪುರಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಹಾಗೂ ಬೂತ್ ಮಟ್ಟದ ಸದಸ್ಯರುಗಳು ಹಾಜರಿದ್ದರು.



