ಮುಲ್ಕಿ: ಸಮೀಪದ ಪರೆಂಕಿಲ ನಿವಾಸಿ ಶಾರದಮ್ಮ (89) ವಯೋ ಸಹಜದಿಂದ ಬುಧವಾರ ಬೆಳಗ್ಗೆ ನಿಧನರಾದರು ಅವರು ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪರೆಂಕಿಲ, ಶಿಮಂತೂರು ಪರಿಸರದಲ್ಲಿ ಯಕ್ಷಗಾನ ಪ್ರೇಮಿಯಾಗಿದ್ದ ಅವರು ತಮ್ಮ ಸಾಮಾಜಿಕ ಕಳಕಳಿಯಿಂದ ಕೊಡುಗೈ ದಾನಿಯಾಗಿ, ಪರೋಪಕಾರಿಯಾಗಿ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಿಬರೂರು ವೇದವ್ಯಾಸ ತಂತ್ರಿ ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ, ಶ್ರೀಕಾಂತ್ ಭಟ್ ಕೊಲಕಾಡಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಆಡಳಿತ ಅಧಿಕಾರಿ ಇಂದು ಎಂ, ಮಾಜೀ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್ ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ,ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಬಾಬಾ ರಂಜನ್ ಶೆಟ್ಟಿ ಮಜಲಗುತ್ತು, ಶಿಮಂತೂರು ಬಾವ ಶಂಕರ್ ಮಾಸ್ಟರ್, ಉದಯಕುಮಾರ್ ಶೆಟ್ಟಿ ಅಧಿಧನ್, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ನ ಸ್ಥಾಪಕಾಧ್ಯಕ್ಷ ವೆಂಕಟೇಶ ಹೆಬ್ಬಾರ್, ದಿನೇಶ್ಚಂದ್ರ ಅಜಿಲ , ಹರೀಶ್ ಶೆಟ್ಟಿ ಶಿಮಂತೂರು ಕಿಲ್ಪಾಡಿ ಗ್ರಾಮ ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯ ಗೋಪಿನಾಥ ಪಡಂಗ, ಶಿಮಂತೂರು ಹಾಲು ಉತ್ಪಾದಕರ ಮಹಿಳಾ ಸಂಘದ ಅಧ್ಯಕ್ಷೆ ಪದ್ಮಿನಿ ವಿಜಯ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಮಮತಾ ಶೆಟ್ಟಿ, ಶಂಕರ್ ಪಡಂಗ ಶಿಮಂತೂರು ಯುವಕ ಮಂಡಲ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.