ಮುಲ್ಕಿ:ಕಾರ್ನಾಡ್ ಶ್ರೀ ಹರಿಹರ ಕ್ಷೇತ್ರ ಯುವಕ ವೃಂದ ಹಾಗೂ ಮಹಿಳಾ ಮಂಡಳಿ ವತಿಯಿಂದ ಲೋಕಲ್ ಕಲ್ಯಾಣಕ್ಕಾಗಿ 41ನೇವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ವಿಠಲ ಭಟ್, ರಾಜಾರಾಮ್ ಭಟ್, ಹಯಗ್ರೀವ ಪಡ್ಡಿಲ್ಲಾಯ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭ ಶ್ರೀ ಹರಿಹರ ದೇವಸ್ಥಾನದ ಆಡಳಿತ ಮೊಕ್ತೇಸರ ಎಮ್ ಎಚ್ ಅರವಿಂದ ಪೂಂಜಾ, ಯುವಕವೃಂದದ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಮಹಿಳಾ ಮಂಡಳಿ ಅಧ್ಯಕ್ಷ ಉಷಾ ಶೇಖರ್ ಮತ್ತಿತರರು ಉಪಸ್ಥಿತರಿದ್ದರು.