Tuesday, January 14, 2025
Homeಸಾಹಿತ್ಯವಿವಿಯಲ್ಲಿ ಕಸಾಪ ವತಿಯಿಂದ ನಾ.ಡಿಸೋಜ ನುಡಿ ನಮನ

ವಿವಿಯಲ್ಲಿ ಕಸಾಪ ವತಿಯಿಂದ ನಾ.ಡಿಸೋಜ ನುಡಿ ನಮನ

ಮಂಗಳಗಂಗೋತ್ರಿ: ನಾ. ಡಿಸೋಜರು ಅಭಿವೃದ್ಧಿ ಮತ್ತು ಪರಿಸರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವನ್ನು ಪ್ರತಿಪಾದಿಸಿದ ಕನ್ನಡದ ಲೇಖಕ. ಅವರ ಕಾದಂಬರಿಗಳಲ್ಲಿ ಪ್ರಕೃತಿವಿನಾಶದ ದುಷ್ಪರಿಣಾಮಗಳ ಕುರಿತು, ಅಭಿವೃದ್ಧಿಯ ಅಮಾನವೀಯ ಮುಖ ಅನಾವರಣಗೊಂಡಿದೆ ಎಂದು ಮಂಗಳೂರು ವಿವಿಯ ಕುಲಸಚಿವ ರಾಜು ಮೊಗವೀರ ಹೇಳಿದರು.

ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಂಗಳೂರು ವಿವಿ ವತಿಯಿಂದ ವಿವಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ನಡೆದ ನಾ. ಡಿಸೋಜ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಭಿವೃದ್ಧಿಯ ಮಾದರಿಗಳು ಭಿನ್ನ ಇರಬಹುದು. ಶರಾವತಿಯಲ್ಲಿ ಮುಳುಗಡೆಯಿಂದ, ಇನ್ನೊಂದೆಡೆ ರಸ್ತೆ ಅಗಲೀಕರಣದಿಂದ, ಮಗದೊಂದೆಡೆ ವಿಮಾನ ನಿಲ್ದಾಣದಿಂದ ಹೀಗೆ ಬೇರೆ ಬೇರೆ ಕಾರಣಗಳಿಂದ ಮನೆ, ಜಾಗ ಕಳೆದುಕೊಂಡು ವಲಸೆ ಹೋಗಬೇಕಾದವರ ಭಾವನೆಗಳು, ಸಂಕಟಗಳು ಸಮಾನ. ಬರಹಗಾರರು ಇಂತಹ ನೋವಿಗೆ ಮಿಡಿಯುತ್ತಾರೆ. ನಾ ಡಿಸೋಜರ ಬರಹದಲ್ಲಿ ನಾವದನ್ನು ಕಾಣಬಹುದಾಗಿದೆ ಎಂದರು.

ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಮಾತನಾಡಿ ನಾ ಡಿಸೋಜರು ಯಾವುದೇ ಒಂದು ಇಸಂಗೆ ಒಳಗಾಗದೇ ಮಾನವೀಯತೆಗೆ ಸ್ಪಂದಿಸಿದ ಅಜಾತಶತ್ರು ಎಂದರು.

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಪುಷ್ಪನಮನ ಸಲ್ಲಿಸಿದರು. ಉಳ್ಳಾಲ ತಾಲೂಕು ಕಸಾಪ ಅಧ್ಯಕ್ಷ ಡಾ‌. ಧನಂಜಯ ಕುಂಬ್ಳೆ, ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಗುರುದತ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಈಶ್ವರ್, ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ದಾಮೋದರ್ ಕುಂದರ್,‌ ಕಸಾಪ ಗೌರವ ಕಾರ್ಯದರ್ಶಿ ರಾಜೇಶ್ವರಿ, ಉಳ್ಳಾಲ ಕಸಾಪ ಕಾರ್ಯದರ್ಶಿ ರವೀಂದ್ರ ರೈ ಹರೇಕಳ,‌ಸಂಘಟನಾ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ದೇರಳಕಟ್ಟೆ, ಪುಷ್ಪರಾಜ್ ಮಂಗಳೂರು , ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ್ ರೇವಣ್ ಕರ್ ಉಳ್ಳಾಲ ಹೋಬಳಿ ಅಧ್ಯಕ್ಷೆ ವಿಜಯಲಕ್ಷ್ಮಿ ರೈ ಕಲ್ಲಿಮಾರ್, ಶಿಕ್ಷಕ ತ್ಯಾಗಂ ಹರೇಕಳ ಮತ್ತಿತರರು ಭಾಗವಹಿಸಿದ್ದರು

RELATED ARTICLES
- Advertisment -
Google search engine

Most Popular