ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಂಘದ ಅಧ್ಯಕ್ಷರಾದ ಸುರೇಶ್ ಪೂಜಾರಿ ಅಬ್ಬನಡ್ಕ ಹಾಗೂ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು ಇವರ ನೇತೃತ್ವದಲ್ಲಿ ಅಬ್ಬನಡ್ಕ ಪರಿಸರದಲ್ಲಿರುವ ನಾಮಫಲಕಗಳಿಗೆ ಪಾಚಿ ಅಂಟಿಕೊಂಡು ನಾಮಫಲಕದಲ್ಲಿರುವ ಹೆಸರುಗಳು ಸಾರ್ವಜನಿಕರಿಗೆ ಕಾಣದಿರುವುದನ್ನು ಪರಿಗಣಿಸಿ ಸ್ವಯಂ ಪ್ರೇರಿತರಾಗಿ ನಾಮಫಲಕ ಸ್ವಚ್ಛತೆ ಮಾಡುವುದರ ಮೂಲಕ ಪರಿಸರದ ಜನರಿಂದ ಮೆಚ್ಚುಗೆಗೆ ಪಾತ್ರರಾದರು.

