ಕಾರ್ಕಳ: ದಿನಾಂಕ 17/09/2025 ರಂದು ಜಗಮೆಚ್ಚಿದ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಕಾರ್ಕಳ ನಗರ ಮಹಿಳಾ ಮೋರ್ಚಾ ವತಿಯಿಂದ ಕಾರ್ಕಳ ಬಂಡಿಮಠ ಮೂಡು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪ್ರಧಾನಿಯವರ ಆರೋಗ್ಯಪೂರ್ಣ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿ, ಸಿಹಿತಿಂಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್, ಸೇವಾ ಪಾಕ್ಷಿಕ ಸಂಚಾಲಕರಾದ ರವೀಂದ್ರ ಕುಮಾರ್, ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್, ನಗರಾಧ್ಯಕ್ಷರಾದ ನಿರಂಜನ್ ಜೈನ್ ,ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷರಾದ ವಿನಯಾ ಡಿ ಬಂಗೇರ, ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಮತಾ ಸುವರ್ಣ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕವಿತಾ ಹರೀಶ್, ಮಹಿಳಾ ಮೋರ್ಚಾ ತಾಲೂಕು ಉಪಾಧ್ಯಕ್ಷರುಗಳಾದ ಭಾರತಿ ಅಮೀನ್ , ಆಶಾ ದೇವೇಂದ್ರ ಶೆಟ್ಟಿ, ಪಲ್ಲವಿ ಪ್ರವೀಣ್ ಹಾಗೂ ಪದಾಧಿಕಾರಿಗಳಾದ ಗೀತಾ ಕಲ್ಲಟ್ಟೆ ಮಮತಾ ನಾಯಕ್, ಶುಭಾಶ ಶೆಟ್ಟಿ,ನೀತಾ ಆಚಾರ್ಯ, ಶಿವಾನಿ ದೇವಾಡಿಗ , ರಜನಿ ಹೆಗ್ಡೆ, ಸರಿತಾ ಹಾಗೂ ಇತರರು ಉಪಸ್ಥಿತರಿದ್ದರು.

