ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಯುಜಿಸಿ ನೀಟ್ ಪರೀಕ್ಷೆ ರದ್ದು ನಿರ್ಧಾರ ಖಂಡಿಸಿ ಸೋಮವಾರ ಪ್ರತಿಭಟನೆ ನಡೆದಿದೆ. ಈ ವೇಳೆ ಜಂತರ್ ಮಂತರ್ನಲ್ಲಿ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎನ್ಎಸ್ಯುಐ ನೇತೃತ್ವದಲ್ಲಿ ಸಂಸತ್ ಅಧಿವೇಶನದ ಮೊದಲ ದಿನ ಇಂದು ಸಂಸತ್ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಲಾಗಿತ್ತು. ವಿದ್ಯಾರ್ಥಿಗಳು ಮೆರವಣಿಗೆ ನಡೆಸದಂತೆ ತಡೆಯಲು ಪೊಲೀಸರು ಜಂತರ್ ಮಂತರ್ನಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರು. ಸಶಸ್ತ್ರ ಪಡೆಗಳು ಹಾಗೂ ದೆಹಲಿ ಪೊಲೀಸರನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು.
ಆದರೆ ಮೆರವಣಿಗೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಾಯಕರುಗಳನ್ನು ವಶಕ್ಕೆ ಪಡೆಯಲಾಯಿತು. ಬಳಿಕ ವಿವಿಧ ಠಾಣೆಗಳಿಗೆ ಕರೆದೊಯ್ಯಲಾಯಿತು.
ನೀಟ್ ಅಕ್ರಮ ಪ್ರಶ್ನಿಸಿ ಸಂಸತ್ನತ್ತ ಜಾಥಾ: ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
RELATED ARTICLES