ಉಡುಪಿ: ನಿಟ್ಟೆ ವಿಶ್ವವಿದ್ಯಾನಿಲಯ ಮಂಗಳೂರು ಕ್ಯಾಂಪಸ್ನಲ್ಲಿ ನ.7ರಂದು ಮತ್ತು ನಿಟ್ಟೆ ಕ್ಯಾಂಪಸ್ಗಳಲ್ಲಿ ನ.8 ರಂದು 15ನೇ ಘಟಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, 1, 999 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ ಎಂದು ಕುಲಪತಿ ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
7ರಂದು ಬೆಳಿಗ್ಗೆ 10.30 ಕ್ಕೆ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕಿಯ ಕಾಲೇಜಿನ (ಕ್ಷೇಮ) ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. 8ರಂದು ಬೆಳಿಗ್ಗೆ 10:30ಕ್ಕೆ ಕಾರ್ಕಳದ ನಿಟ್ಟೆಯ ಕ್ಯಾಂಪಸ್ನಲ್ಲಿ ಟಿಕೋತ್ಸವ ನಡೆಯಲಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ಪ್ರತಿಷ್ಠಿತ ಶಿಕ್ಷಣ ತಜ್ಞ ಪ್ರೊ. ಡಾ. ಸಿದ್ದು ಪಿ. ಅಲ್ಲೂರ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಸಹ ಕುಲಾಧಿಪತಿ (ಆಸ್ಪತ್ರೆ ನಿರ್ವಹಣೆ) ಪ್ರೊ. ಡಾ. ಎಂ. ಶಾಂತಾರಾಮ ಶೆಟ್ಟಿ ಹಾಗೂ ಕುಲಾಧಿಪತಿ (ಆಡಳಿತ)ವಿಶಾಲ್ ಹೆಗ್ಡೆ ಉಪಸ್ಥಿತರಿರುವರು ಎಂದರು.
ಮಂಗಳೂರಿನ ಕ್ಯಾಂಪಸ್ನಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವೈದ್ಯಕಿಯ, ದಂತ ವೈದ್ಯಕಿಯ, ಔಷಧ ವಿಜ್ಞಾನ, ನರ್ಸಿಂಗ್. ಫಿಸಿಯೋಥೆರಪಿ, ಅರೆ ವೈದ್ಯಕಿಯ ವಿಜ್ಞಾನ, ಮಾನವಿಕ, ಜೀವವಿಜ್ಞಾನ, ವಾಸ್ತುಶಿಲ್ಪ, ವಾಕ್ ಮತ್ತು ಶ್ರವಣ, ಅತಿಥ್ಯ ನಿರ್ವಹಣೆ ನಿಕಾಯ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗುವುದು, ನಿಟ್ಟೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ಸ್, ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ವ್ಯವಹಾರ ಆಡಳಿತ. ವಾಣಿಜ್ಯ ಮತ್ತು ನಿರ್ವಹಣೆ ನಿಕಾಯ ವಿಷಯಗಳ ಪದವಿ ಪ್ರದಾನ ನಡೆಯಲಿದೆ. ಒಟ್ಟಾರೆಯಾಗಿ 31 ಪಿಎಚ್ಡಿ ಪದವಿಗಳು, 907 ಸ್ನಾತಕೋತ್ತರ ಪದವಿಗಳು. 1054 ಸ್ನಾತಕ ಪದವಿಗಳು, 5 ಫೆಲೋಶಿಪ್ಗಳು ಮತ್ತು 2 ಸ್ನಾತಕೋತ್ತರ ಡಿಪ್ಲೊಮಾ ಪದವಿಗಳನ್ನು ಪ್ರದಾನ ಮಾಡಲಾಗುವುದು. ವಿದ್ಯಾರ್ಥಿಗಳಿಗೆ 51 ಚಿನ್ನದ ಪದಕ ನೀಡಲಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ. ಡಾ. ಹರ್ಷ ಹಾಲಹಳ್ಳಿ, ಪರೀಕ್ಷಾ ನಿಯಂತ್ರಕ ಪ್ರೊ. ಡಾ. ಪ್ರಸಾದ್ ಬಿ. ಶೆಟ್ಟಿ, ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ನಿರಂಜನ್ ಚಿಪ್ಲೂಂಕರ್, ಡಾ. ಸುಧೀರ್ ಎಂ. ಉಪಸ್ಥಿತರಿದ್ದರು.

