ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಮತ್ತು ಬಿ ಶಿವಕುಮಾರ ನೇತೃತ್ವದ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿ ಆಶ್ರಯದಲ್ಲಿ ನ.15ರಂದು ಬೆಳಗ್ಗೆ 10ರಿಂದ ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ವೇದಿಕೆಯಲ್ಲಿ ಕೋಲಾರ-ಕಾಸರಗೋಡು ಗಡಿನಾಡ ಕನ್ನಡ ರಾಜ್ಯೋತ್ಸವ ಸಂಭ್ರಮ-2025 ನಡೆಯಲಿದೆ. ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ದೀಪ ಬೆಳಗಿಸಿ, ಪ್ರಾಸ್ತಾವಿಕವಾಗಿ ಮಾತನಾಡುವರು. ಕೋಲಾರದ ಪಿ. ನಾರಾಯಣಪ್ಪ ಕನ್ನಡ ಧ್ವಜಾರೋಹಣದೊಂದಿಗೆ ಉದ್ಘಾಟಿಸುವರು. ಸಮಾಜ ಸೇವಕ ಬಿ. ವೆಂಕಟರಾಮಯ್ಯ ಕೋಲಾರ ಅವರು ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡುವರು. ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಅವರು ಕನ್ನಡ ಭವನದ ನವೀಕೃತ ರಜತ ಸಂಭ್ರಮ ವೇದಿಕೆಯನ್ನು ಲೋಕಾರ್ಪಣೆ ಮಾಡುವರು. ಕೋಲಾರದ ರಂಗ ಇಂಚರ ಟ್ರಸ್ಟ್ ಅಧ್ಯಕ್ಷ ಡಾ. ಇಂಚರ ನಾರಾಯಣ ಸ್ವಾಮಿ ಅವರು ಕನ್ನಡ ರಾಜ್ಯೋತ್ಸವ ಸಂದೇಶ ನೀಡುವರು. ಬಿ. ಶಿವಕುಮಾರ ಕೋಲಾರ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯ್ಯಕಟ್ಟೆ, ಪ್ರಾಧ್ಯಾಪಕ ಡಾ. ಶರಣಪ್ಪ ಗಬ್ಬೂರ್, ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ, ಸಾಹಿತಿ ರುಬೀನಾ ಎಂ ಎ, ಸಾಮಾಜಿಕ ಮುಖಂಡರಾದ ಗೋಪಾಲ ಶೆಟ್ಟಿ ಅರಬೈಲು, ಶ್ರೀಧರ ಶೆಟ್ಟಿ ಮುಟ್ಟಂ, ಕಾಸರಗೋಡಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ದಾಸ ಸಂಕೀರ್ತನಕಾರ ಜಯಾನಂದ ಕುಮಾರ ಹೊಸದುರ್ಗ, ಪ್ರಾಂಶುಪಾಲ ಕೆ ಪಿ ರಾಜೇಶ್ಚಂದ್ರ, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ಪತ್ರಕರ್ತ ಪ್ರದೀಪ್ ಬೇಕಲ್, ಸಾಹಿತಿ ವಿರಾಜ್ ಅಡೂರು, ಆಶ್ರಿತ್ ರೈ ಮಧೂರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ವಿವಾಹ ರಜತ ಸಂಭ್ರಮದಲ್ಲಿರುವ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ – ರೂಪಕಲಾ ದಂಪತಿಯನ್ನು ಗೌರವಿಸಲಾಗುವುದು. 25 ಮಂದಿ ಮುತೈದೆಯರಿಗೆ ಬಾಗಿನ ಸಮರ್ಪಣೆ ನಡೆಯಲಿದೆ. ಅಪರಾಹ್ನ 1ರಿಂದ ಸಾಹಿತಿ, ಪತ್ರಕರ್ತ ವಿರಾಜ್ ಅಡೂರು ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ ನಡೆಯಲಿದೆ. ಸುಮಾರು 20 ಮಂದಿ ಕವಿಗಳು ಭಾಗವಹಿಸಲಿದ್ದಾರೆ. ಡಾ. ಶರಣಪ್ಪ ಗಬ್ಬೂರ್ ಉದ್ಘಾಟಿಸುವರು. ಪಿ. ನಾರಾಯಣಪ್ಪ, ದೇವರಾಜ್ ಆಚಾರ್ಯ ಸೂರಂಬೈಲು, ಶಶಿಕಲಾ ಟೀಚರ್ ಕುಂಬಳೆ ಸಹಕರಿಸುವರು.
ನಂತರ ಗುರುರಾಜ್ ಕಾಸರಗೋಡು ಸಾರಥ್ಯದ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆಯ ಸುಮಾರು 50 ಮಂದಿ ಕಲಾವಿದರಿಂದ ಸಾಂಸ್ಕೃತಿಕ ವೈಭವ ಹಾಗೂ ಕೀಕಾನ ವಿಷ್ಣುಪ್ರಿಯಾ ಮಹಿಳಾ ಸಂಘದ ಸದಸ್ಯರಿಂದ ನೃತ್ಯ ಸಂಭ್ರಮ ನಡೆಯಲಿದೆ. ಸಂಜೆ 3.30ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ 2025ನೇ ಸಾಲಿನ ಸ್ವರ್ಣಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕಾಸರಗೋಡಿನ ಕನ್ನಡ ಭವನದ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಭರವಸೆಯ ಬೆಳಕು ಪ್ರಶಸ್ತಿ, ಲೈಟ್ ಆಫ್ ಹೋಪ್ಸ್ ಅಚ್ಯುವ್ಮೆಂಟ್ ಅವಾರ್ಡ್ ಪ್ರದಾನ ಮಾಡಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಖ್ಯಾತ ವಿಮರ್ಶಕ ಡಾ. ಬಿ ಜನಾರ್ದನ ಭಟ್ ಭಾಗವಹಿಸುವರು. ಪ್ರಾಧ್ಯಾಪಕ ಜಯಾನಂದ ಪೆರಾಜೆ ಸಮಾರೋಪ ಭಾಷಣ ಮಾಡುವರು. ಡಾ. ರವೀಂದ್ರ ಜೆಪ್ಪು, ಗುರುಪ್ರಸಾದ್ ಕೋಟೆಕಣಿ, ಪ್ರಕಾಶ್ಚಂದ್ರ ಕಾಸರಗೋಡು ಉಪಸ್ಥಿತರಿರುವರು. ಪ್ರೊ. ಎ ಶ್ರೀನಾಥ್ ಕಾಸರಗೋಡು, ರಾಜೇಶ್ ಕೋಟೆಕಣಿ ಸಹಕರಿಸುವರು.

