ವಿಷಯಾಧಾರಿತ ಚುನಾವಣೆಯಿಂದ ಮಾತ್ರ ಗೆಲ್ಲಲು ಸಾಧ್ಯ

0
35


ಉಡುಪಿ: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿವಾದಾತ್ಮಕ ವಿಷಯಗಳನ್ನು ಪ್ರಸ್ತುತಪಡಿಸಿ ಜನರ ದಾರಿ ತಪ್ಪಿಸುತ್ತಿದೆ. ಹೀಗಾಗಿ ಕಾಂಗ್ರೆಸ್​ ಸರ್ಕಾರದ ಸಾಧನೆ ಜೊತೆಗೆ ವಿಷಯಾಧಾರಿತ ಚುನಾವಣೆಯಿಂದ ಮಾತ್ರ ಗೆಲ್ಲಲು ಸಾಧ್ಯ ಎಂದು ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಹೇಳಿದರು.
ಕಾಂಗ್ರೆಸ್​ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಹೆಸರಿನಲ್ಲಿ ಬಿಜೆಪಿ ಮತ ಕೇಳುತ್ತಿದೆ. ಆದರೆ ಹೆಣ್ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಹಕ್ಕು ನೀಡಿದ್ದು ಕಾಂಗ್ರೆಸ್​ ಸರ್ಕಾರ. ಬಿಜೆಪಿಗೆ ಪಾಕಿಸ್ತಾನ, ಮುಸ್ಲಿಂ ಬಿಟ್ಟರೆ ಬೇರೆ ವಿಷಯಗಳಿಲ್ಲ. ದೇಶಕ್ಕೆ ಶೇ.50ರಷ್ಟು ಕ್ರೂಡ್​ ಆಯಿಲ್​ ಮಧ್ಯಪ್ರಾಚ್ಯದ ಮುಸ್ಲಿಂ ದೇಶಗಳಿಂದ ಬರುತ್ತದೆ. 40 ರಿಂದ 50 ಲಕ್ಷ ಜನ ಗಲ್ಫ ರಾಷ್ಟ್ರಗಳಲ್ಲಿದ್ದಾರೆ. ಎನ್​ಡಿಎ ಸರ್ಕಾರ 23 ಸಾರ್ವಜನಿಕರಂಗ ಕಂಪೆನಿಗಳನ್ನು ಖಾಸಗಿಕರಣ ಮಾಡಿದೆ. ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ 6 ಸಾವಿರ ಕೋಟಿ ರೂ. ವಿನಿಯೋಗಿಸಿದೆ. ಈ ಎಲ್ಲಾ ವಿಚಾರಗಳನ್ನು ಯುವಜನತೆಗೆ ತಿಳಿಸಬೇಕು ಎಂದರು.
ವಿಪ ಸದಸ್ಯ ಮಂಜುನಾಥ ಭಂಡಾರಿ ಮತ್ತು ಮಾಜಿ ಸಚಿವ ವಿನಯಕುಮಾರ್​ ಸೊರಕೆ ಮಾತನಾಡಿದರು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಪೂರ್​, ಕೆಪಿಸಿಸಿ ವಕ್ತಾರ ಅನಿಲ್​ ಕುಮಾರ್​, ಲಾವಣ್ಯ ಬಲ್ಲಾಳ್​, ನಗರ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕಾಂಗ್ರೆಸ್​ ಕಾರ್ಯಾಧ್ಷಕ್ಷ ಕಿಶನ್​ ಹೆಗ್ಡೆ ಕೊಳ್ಕೆಬೈಲ್​, ಮುಖಂಡರಾದ ಮುನಿಯಾಲು ಉದಯ ಕುಮಾರ್​ ಶೆಟ್ಟಿ, ಪ್ರಸಾದ್​ ರಾಜ್​ ಕಾಂಚನ್​, ದಿನೇಶ್​ ಹೆಗ್ಡೆ ಮುಳವಳ್ಳಿ , ರಾಜು ಪೂಜಾರಿ, ದಿನೇಶ್​ ಪುತ್ರನ್​, ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ರಮೇಶ್​ ಕಾಂಚನ್​ , ಜಿಲ್ಲಾ ಮಹಿಳಾ ಕಾಂಗ್ರೆಸ್​ ಅಧ್ಯೆ ಜ್ಯೋತಿ ಹೆಬ್ಬಾರ್​, ವೋಟ್​ ಚೋರಿ ಅಭಿಯಾನ ಸಂಚಾಲಕ ಹರಿಪ್ರಸಾದ್​ ರೈ ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಅಶೋಕ್​ ಕುಮಾರ್​ ಕೊಡವೂರು ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್​ ಅಧ್ಯಕ್ಷರಾದ ಅಣ್ಣಯ್ಯ ಸೇರಿಗಾರ್​ ಮತ್ತು ಜಿಲ್ಲಾ ವಕ್ತಾರರಾದ ಭಾಸ್ಕರ ರಾವ್​ ಕಿದಿಯೂರು ಕಾರ್ಯಕ್ರಮ  ನಿರ್ವಹಿಸಿದರು.

LEAVE A REPLY

Please enter your comment!
Please enter your name here