ಕಾರ್ಕಳ: ವಿವಾದಕ್ಕೆ ಕಾರಣವಾಗಿರುವ ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾರ್ಕಿನ ಪರಶುರಾಮ ಪ್ರತಿಮೆ ರಹಸ್ಯ ಬಯಲಿಗೆಳೆದ ವಿಷಯಕ್ಕೆ ಸಂಬಂಧಿಸಿ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಅ.22ರಂದು ಪರಶುರಾಮ ಥೀಂ ಪಾರ್ಕಿಗೆ ಎಂಎಲ್ಸಿ ಮಂಜುನಾಥ ಭಂಡಾರಿ ಭೇಟಿ ನೀಡಿ ಪರಿಶೀಲಿಸಿದ್ದರು. ಈ ವೇಳೆ ತೆರವು ಮಾಡಲಾದ ಪ್ರತಿಮೆಯ ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ವಿಡಿಯೋ ಮಾಡಿದ್ದನ್ನು ಕಾಂಗ್ರೆಸ್ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಆಧರಿಸಿ ಎರ್ಲಪಾಡಿ ಗ್ರಾ ಪಂ ಅಧ್ಯಕ್ಷ ಸುನಿಲ್ ಹೆಗ್ಡೆ ನಗರ ಠಾಣೆಗೆ ದೂರು ನೀಡಿದ್ದರು. ಕಾಂಗ್ರೆಸ್ ಮುಖಂಡರಾದ ಶುಭದ ರಾವ್, ಸುಭಿತ್ ಕುಮಾರ್, ವಿವೇಕಾನಂದ ಶೆಣೈ, ಐವನ್ ಮಿರಾಂಡ ಸೇರಿದಂತೆ ಒಟ್ಟು ನಾಲ್ಕು ಮಂದಿಯ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋ್ರ್ಟ್ ಪ್ರಕರಣದ ಬಗ್ಗೆ ತಡೆ ನೀಡಿದೆ. ಕೆರೆಬೆಟ್ಟು ಪ್ರಸನ್ನ ಶೆಟ್ಟಿ ವಾದಿಸಿದ್ದರು.