Friday, May 16, 2025
Homeರಾಜ್ಯಅಪೂರ್ಣ ಕಾಮಗಾರಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ಸೋರಿಕೆ: ಪೇಜಾವರ ಶ್ರೀ

ಅಪೂರ್ಣ ಕಾಮಗಾರಿಯಿಂದ ಅಯೋಧ್ಯೆ ಶ್ರೀರಾಮ ಮಂದಿರ ಸೋರಿಕೆ: ಪೇಜಾವರ ಶ್ರೀ

ವಿಜಯಪುರ: ಅಯೋಧ್ಯೆ ಶ್ರೀರಾಮ ಮಂದಿರದ ಮೇಲ್ಛಾವಣಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಗಳಾಗಿಲ್ಲ. ಇನ್ನೊಂದು ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಪ್ರತಿಪಕ್ಷಗಳ ಮೋಸ, ಆಮಿಷದಿಂದಾಗಿ ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲಾಗಿದೆಯೇ ಹೊರತ, ಇದನ್ನು ಹಿಂದುಗಳಿಗೆ ಹಿನ್ನಡೆ ಎಂದು ವಿಶ್ಲೇಷಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್‌ ಗಾಂಧಿಯವರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಸಹಿಷ್ಣುಗಳಾದ ಹಿಂದುಗಳನ್ನು ಕೆಣಕಬೇಕು, ಒಂದಷ್ಟು ಗೊಂದಲ ಸೃಷ್ಟಿಸಬೇಕು, ತಮ್ಮ ಬೇಳೆ ಬೇಯಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ರಾಜಕೀಯ ನಾಯಕರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಬಾರದು ಎಂದು ಅವರು ಸಲಹೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular