Thursday, April 24, 2025
HomeUncategorizedರಾಮಕೃಷ್ಣ ಮಠದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ

ರಾಮಕೃಷ್ಣ ಮಠದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ


“ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಹೊರತರುವುದೇ ನಿಜವಾದ ಶಿಕ್ಷಣ” ಎಂದು ಸ್ವಾಮಿ ವಿವೇಕಾನಂದರು ಹೇಳಿದರು. ಶಿಕ್ಷಣವೆಂದರೆ ಕೇವಲ ಪುಸ್ತಕಗಳ ಕಲಿಕೆಯಲ್ಲ ಅದು ಮಾನವನ ಸರ್ವತೋಮಖ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂಬುದು ಸ್ವಾಮಿ ವಿವೇಕಾನಂದರ ಆಶಯ. ಈ ಆಶಯದಂತೆ ಮಂಗಳೂರಿನ ರಾಮಕೃಷ್ಣ ಮಠವು ವಿವಿಧ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ.

ಈ ಹಿನ್ನಲೆಯಲ್ಲಿ ಮಂಗಳೂರಿನ ರಾಮಕೃಷ್ಣ ಮಠವು ಮಕ್ಕಳಿಗಾಗಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸುತ್ತಿದೆ. ಈ ಶಿಬಿರವು ಏಪ್ರಿಲ್ ೧೦ ರಿಂದ ಪ್ರಾರಂಭವಾಗಲಿದ್ದು ಏಪ್ರಿಲ್ ೨೫ ರ ವರೆಗೆ ಬೆಳಗ್ಗೆ ೮.೩೦ ರಿಂದ ಮಧ್ಯಾಹ್ನ ೧೨ ಗಂಟೆಯ ವರೆಗೆ ಮಂಗಳೂರು ರಾಮಕೃಷ್ಣ ಮಠದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಮಕ್ಕಳಿಗೆ ಪ್ರಾಣಾಯಾಮ, ಧ್ಯಾನ, ಭಗವದ್ಗೀತೆ, ರಸಪ್ರಶ್ನೆ, ಭಕ್ತಿಗೀತೆ, ಚಿತ್ರಕಲೆ, ಕರಕುಶಲ ಕಲೆ, ಕರಾಟೆ, ಯೋಗಾಸನ, ಟೈಲರಿಂಗ್ ತರಬೇತಿ, ಚೆಸ್, ಇತ್ಯಾದಿಗಳನ್ನು ಕಲಿಯಲು ಅವಕಾಶವಿದೆ. ಇದರ ಜೊತೆಗೆ ವಿವಿಧ ಚಟುವಟಿಕೆಗಳೊಂದಿಗೆ ಉತ್ತಮ ವಾತಾವರಣದಲ್ಲಿ ಈ ಶಿಬಿರವು ನಡೆಯಲಿದೆ. ೪ ರಿಂದ ೧೭ನೇ ವಯಸ್ಸಿನ ಮಕ್ಕಳಿಗೆೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಶಿಬಿರಕ್ಕೆ ಪ್ರವೇಶ ಪಡೆಯಲು ಏಪ್ರಿಲ್ ೮ ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿಗಳು ಮಠದ ಕಾರ್ಯಾಲಯದಲ್ಲಿ ತಮ್ಮ ಹೆಸರನ್ನು ನ್ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮಠದ ಕಾರ್ಯಾಲಯ ದೂರವಾಣಿ ಸಂಖ್ಯೆ ೦೮೨೪-೨೪೧೪೪೧೨ ಸಂಪರ್ಕಿಸಬಹುದು.

RELATED ARTICLES
- Advertisment -
Google search engine

Most Popular