ಉಡುಪಿ: ರಾಜಕೀಯ ಟೀಕೆ-ಟಿಪ್ಪಣಿಗಳು ಕಾನೂನಿನ ಹಾಗೂ ಸಭ್ಯತೆಯ ಚೌಕಟ್ಟಿನಲ್ಲಿರಬೇಕು. ಶಾಸಕರು ಜನಪ್ರತಿನಿಧಿಗಳಾಗಿ ತಮ್ಮ ಭಾಷೆಯ ಬಳಕೆಯಲ್ಲಿ ಜಾಗರೂಕರಾಗಿರಬೇಕು. ಪಕ್ಷದ ಸಿದ್ಧಾಂತದ ಬಗ್ಗೆ ಹೋರಾಟ ಮಾಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ವೈಯಕ್ತಿಕ ನಿಂದನೆ ಹಾಗೂ ಅತಿರೇಕದ ಮಾತುಗಳು ಸರಿಯಲ್ಲ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ರಬ್ಬರ್ ಪೆಲೆಟ್ ದಾಳಿಯನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ರ್ಖಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಎಲ್ಲರ ಹಕ್ಕು ಎಂದು ಅವರು ಪ್ರತಿಪಾದಿಸಿದರು.
ಕಾನೂನು ಕ್ರಮ
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಬಾಬರಿ ಮಸೀದಿ ಧ್ವಂಸ ಹಾಗೂ ರಾಹುಲ್ ಗಾಂಧಿ ಅವರ ಕುಟುಂಬದ ಕುರಿತು ನೀಡಿದ ಹೇಳಿಕೆಗಳು ಶಾಸಕ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಈಗಾಗಲೇ ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಅಷ್ಟಕ್ಕೇ ಇದು ಮುಗಿಯುವುದಿಲ್ಲ. ಶಾಸಕರ ವಿರುದ್ಧ ಕ್ರಿಮಿನಲ್ ಹಾಗೂ ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡಲು ತೀಮಾರ್ನಿಸಲಾಗಿದೆ ಎಂದರು.
ಸುಷ್ಮಾ ಸ್ವರಾಜ್ ಮಾತುಗಳ ನೆನಪು
ಸುಷ್ಮಾ ಸ್ವರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾ ಆಡಳಿತ ಮತ್ತು ವಿರೋಧ ಪಕ್ಷಗಳು ವೈರಿಗಳಲ್ಲ, ಕೇವಲ ಸೈದ್ಧಾಂತಿಕ ವಿರೋಧಿಗಳು ಅಷ್ಟೇ. ಇದನ್ನು ಪ್ರತಿಯೊಬ್ಬ ಜನಪ್ರತಿನಿಧಿಯೂ ಅರ್ಥೈಸಿಕೊಳ್ಳಬೇಕು ಎಂದರು.
ಮಹಿಳಾ ಕಾಂಗ್ರೆಸ್ ಅಧ್ಯೆ ಜ್ಯೋತಿ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಹರೀಶ್ ಕಿಣಿ ಉಪಸ್ಥಿತರಿದ್ದರು.
ಇಂದು ಕಾಂಗ್ರೆಸ್ ಪ್ರತಿಭಟನೆ
ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ತಮ್ಮ ಹುದ್ದೆ ನತೆ ಮರೆತು ರಾಹುಲ್ ಗಾಂಧಿ ವಿರುದ್ಧ ಕಳಪೆ ಭಾಷೆ ಪ್ರಯೋಗಿಸಿದ್ದಾರೆ. ಇದನ್ನು ಖಂಡಿಸಿ ಜುಲೈ 31ರಂದು ಬೆಳಗ್ಗೆ 10 ಗಂಟೆಗೆ ಜಡ್ಕಾ ಸ್ಟಾ$ಂಡ್ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದೆ ಎಂದು ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದರು.

