ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಹನ್ನೊಂದನೇ ದಿನದ ಪ್ರದಕ್ಷಿಣೆಗೆ ದಿನಾಂಕ: 24-06-2024 ಸೋಮವಾರ ಉದ್ಯಾವರ ಶ್ರೀ ಶಂಭುಕಲ್ಲು ಶೈಲೇಶ್ವರ ಶಿವ ದೇವಸ್ಥಾನದ ಅರ್ಚಕರಾದ ಶ್ರೀ ಗಣಪತಿ ಆಚಾರ್ಯ , ಆಡಳಿತ ಮುಕ್ತೇಸರರು ಶ್ರೀ ರಾಘವೇಂದ್ರ ಮಯ್ಯರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು ಈ ಸಂದರ್ಭದಲ್ಲಿ ಶ್ರೀಮತಿ ಗೀತಾಂಜಲಿ ಎಂ.ಸುವರ್ಣ , ಶ್ರೀಮತಿ ವೀಣಾ .ಎಸ್.ಶೆಟ್ಟಿ, ಶ್ರೀ ವಿಜಯ ಕುಂದರ್,ಶ್ರೀ ಸತೀಶ್ ದೇವಾಡಿಗ, ಶ್ರೀ ಶಶಾಂಕ್ ಉಪಸ್ಥಿತರಿದ್ದರು.