Tuesday, May 13, 2025
Homeಸುಳ್ಯಪ್ರವೀಣ್‌ ನೆಟ್ಟಾರು ಕೊಲೆ ಕೇಸು: ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು 13 ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಪ್ರವೀಣ್‌ ನೆಟ್ಟಾರು ಕೊಲೆ ಕೇಸು: ಗಲಭೆಯಲ್ಲಿ ಭಾಗಿಯಾಗಿಲ್ಲವೆಂದು 13 ಯುವಕರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆಯಾದ ನಂತರ ನಡೆದ ಯಾವುದೇ ಗಲಭೆಗಳಲ್ಲಿ ನಾವು ಭಾಗಿಯಾಗಿಲ್ಲ. ನಮ್ಮ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು 13 ಮಂದಿ ಯುವಕರು ಸುಳ್ಯದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಿಂದೂ ಮುಖಂಡ ಶಿವ ಪೂಜಾರಿ ಅವರ ನೇತೃತ್ವದಲ್ಲಿ 13 ಮಂದಿ ಯುವಕರು ಪ್ರಾರ್ಥನೆ ಸಲ್ಲಿಸಿ, ತಾವೇನೂ ತಪ್ಪು ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ.
ನಂದಕುಮಾರ್‌, ಕಮಲಾಕ್ಷ, ಅರುಣ್‌ ರೈ, ಪದ್ಮನಾಭ ತಡಗಜೆ, ಪ್ರಶಾಂತ್‌, ಆನಂದ ಯು, ಧರ್ಮಪಾಲ, ಚಿದಾನಂದ ಬಾಳಿಲ, ಹರೀಶ್‌ ಬಾಳಿಲ, ಡಿಪಿನ್‌ ಎಡಮಂಗಲ, ಶಿವಾನಂದ, ಹರ್ಷಿತ್‌, ನಿತೀಶ್‌ ಕೆ. ಮುಂತಾದವರ ಮೇಲೆ ಕೇಸು ದಾಖಲಾಗಿತ್ತು. ಹೀಗಾಗಿ ಅವರು ತಮ್ಮ ವಿರುದ್ಧ ಬಂದಿರುವ ಅಪವಾದ ಸುಳ್ಳು ಎಂದು ದೈವದ ಮುಂದೆ ಪ್ರಾರ್ಥಿಸಿದ್ದಾರೆ. ಈ ವೇಳೆ ದೈವಸ್ಥಾನದ ಅರ್ಚಕ ತಿಮ್ಮಪ್ಪ ನಾವೂರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular