ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಪರಸ್ಪರ ಹೊಡೆದಾಡಿಕೊಂಡ ಕೈದಿಗಳು

0
21

ಮಂಗಳೂರು: ಮಂಗಳೂರಿನ ಕೊಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಮತ್ತೊಂದು ಮಾರಾಮಾರಿ ನಡೆದಿದೆ. ಗುರುವಾರ (ಜೂನ್ 26) ಜೈಲು ಆವರಣದಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಈ ಘರ್ಷಣೆಯಲ್ಲಿ ಉಳ್ಳಾಲದ ಕುಖ್ಯಾತ ರೌಡಿ ಮುಖಾರ್ ಮತ್ತು ಇತರ ಕೈದಿಗಳು ಭಾಗಿಯಾಗಿದ್ದರು. ಮುಖ್ಯಾರ್ ಕೇಶವ್ ಎಂಬ ಮತ್ತೊಬ್ಬ ಕೈದಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಗಂಭೀರ ಗಾಯಗೊಂಡ ಕೇಶವ್ ಅವರನ್ನು ಪೊಲೀಸರು ವೆಫ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನವೆಂಬರ್ 6, 2023 ರಂದು ನಡೆದ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಕೇಶವ್ ಆರೋಪಿಯಾಗಿದ್ದು, ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಉಳ್ಳಾಲದ ಧರ್ಮನಗರ ನಿವಾಸಿ ಮೊಹಮ್ಮದ್ ಮುಖಾರ್ 15 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಬಂಧನದ ಸಮಯದಲ್ಲಿ ಕಾಲಿಗೆ ಗುಂಡು ಹಾರಿಸಿದ ನಂತರ ಜುಲೈ 2022 ರಲ್ಲಿ ಬಂಧಿಸಲಾಯಿತು. ಕಳೆದ ಕೆಲವು ತಿಂಗಳುಗಳಿಂದ ಕೈದಿಗಳ ನಡುವೆ ಪದೇ ಪದೇ ಘರ್ಷಣೆಗಳು ನಡೆಯುತ್ತಿರುವುದು ಜೈಲಿನ ಭದ್ರತೆ ಮತ್ತು ನಿರ್ವಹಣೆಯ ಬಗ್ಗೆ ಪ್ರಶ್ನೆ ಹುಟ್ಟು ಹಾಕಿದೆ.

LEAVE A REPLY

Please enter your comment!
Please enter your name here