ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹೀರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರಾತ್ರಿ 9.15 ಕ್ಕೆ ನಡೆದಿದೆ.
ಪಿಕಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು. ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್, ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತ್ತಿದ್ದ ಪಿಕಪ್ ಮುಖಮುಖಿ ಡಿಕ್ಕಿ ಹೊಡೆದಿದೆ.
ಬಸ್ ಚಾಲಕನ ಅತೀ ವೇಗದ ಚಾಲನೇ ಅವಘಡಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.