ಇಳಂತಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಪ್ರತಿಭಟನೆ

0
170

ಇಳಂತಿಲ: ಇಳಂತಿಲ ಶಕ್ತಿ ಕೇಂದ್ರದ ವತಿಯಿಂದ ಇಳಂತಿಲ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೂ 23 ರಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಕಾರರನ್ನು ಉದ್ದೇಶಿಸಿ ವಕೀಲರಾದ ಸುಬ್ರಮಣ್ಯ ಕುಮಾರ್ ಆಗರ್ತ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ತಿಮ್ಮಪ್ಪ ಇಳoತಿಲ,ಸಿ ಎ ಬ್ಯಾಂಕ್ ನಿರ್ದೇಶಕರಾದ ರಾಘವ ನಾಯ್ಕ, ಹಾಲು ಉತ್ಪಾದಕರ ಸಂಘ ಅಧ್ಯಕ್ಷರಾದ ವೆಂಕಟ್ರಮಣ ಭಟ್ ಪೆಲಪ್ಪಾರು, ಗಣೇಶ್ ಭಟ್, ಪುರಂದರ,ರಮೇಶ, ಶ್ರೀದುರ್ಗ, ಬೂತ್ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿ ಕರುಣಾಕರ, ಮೋಹನ್ ಶೆಟ್ಟಿ ವಸಂತ ಪಂಚವಟಿ, ಪ್ರವೀಣ್, ಶಶಿ, ನಾರಾಯಣ್ ಭಟ್, ಪ್ರೀತಂ ಮತ್ತು ಬಿಜೆಪಿ ಯ ಕಾರ್ಯಕರ್ತರು ಉಪಸ್ಥಿತರಿದ್ದರು ರವಿ ಇಳಂತಿಲ ಧನ್ಯವಾದವಿತ್ತರು. ಪಂಚಾಯತ್ ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here