Tuesday, January 14, 2025
Homeದಾವಣಗೆರೆಪೂರ್ಣಿಮಾ ಪವಾರ್ ರಾಯಚೂರ್ ಕನ್ನಡ ಭವನದ ರಾಯಚೂರು ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ.

ಪೂರ್ಣಿಮಾ ಪವಾರ್ ರಾಯಚೂರ್ ಕನ್ನಡ ಭವನದ ರಾಯಚೂರು ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ.


ಕಾಸರಗೋಡು : ಪತ್ರಕರ್ತೆ, ಸಂಘಟಕಿ, ರಂಗಕಲಾವಿದೆ ಪೂರ್ಣಿಮಾ ಪವಾರ್ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ರಾಯಚೂರು ಜಿಲ್ಲಾ ಘಟಕದ, ಜಿಲ್ಲಾಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025 ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಸಿ. ವೈ. ಮೆಣಸಿನಕಾಯಿ ನಾಮ ನಿರ್ದೇಶನ ಮಾಡಿದರು.ವಿಜಯನಗರ ಜಿಲ್ಲಾಧ್ಯಕ್ಷರಾದ ಚಿಟಗೇರಿ ಕೊಟ್ರೇಶಿ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಪೂರ್ಣಿಮಾ ಪವಾರ್ ಅವರು, ಕನ್ನಡ ಭವನ ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, ಕರ್ನಾಟಕದಿಂದ ಕಾಸರಗೋಡಿಗೆ, ಆಗಮಿಸುವ, ಸಾಹಿತ್ಯ, ಸಾಂಸ್ಕೃತಿಕ ರಾಯಭಾರಿಗಳಿಗೆ “ಉಚಿತ ವಸತಿ ಸೌಕರ್ಯ “, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಮತ್ತು ರಜತ ಸಂಭ್ರಮ ವಿಶೇಷ ಕಾರ್ಯಕ್ರಮಗಳ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವಿತ್ತರಾಗಬೇಕೆಂದು ಕಾಸರಗೋಡು ಕನ್ನಡ ಭವನದ ಸ್ಥಾಪಕಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular