ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಪ್ರಿಯಕರನ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾವತಿ ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ ಎಸಗಿದ ಆರೋಪಿ. ಆರೋಪಿ ರವಿರಾಜ್ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾಳೆ. 2020ರಲ್ಲಿ ಸಂತ್ರಸ್ತೆ ದ್ವೀತಿಯ ಪಿಯುಸಿ ಓದುವಾಗ ರವಿರಾಜ್ ಪರಿಚಯವಾಗಿದ್ದಾನೆ. ಪರಿಚಹ ಸ್ನೇಹ, ಸ್ನೇಹ ಪ್ರೀತಿಯಾಗಿ ಬದಾಲಗಿದೆ. ಇಬ್ಬರೂ 2021ರಿಂದ ಪರಸ್ಪರ ಪ್ರೀತಿಸಲು ಆರಂಭಿಸಿದ್ದಾರೆ.
ಈ ವಿಚಾರ ಪ್ರೇಮಿಗಳ ಮನೆಯಲ್ಲಿ ಗೊತ್ತಾಗಿದ್ದು, ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಸಂತ್ರಸ್ತೆ ಪ್ರೀತಿ ಬೇಡ ಅಂತ ರವಿರಾಜ್ನಿಂದ ದೂರು ಉಳಿಯಲು ಆರಂಭಿಸಿದ್ದಾಳೆ. ಆದರೆ ರವಿರಾಜ್ ಸಂತ್ರಸ್ತೆ ಮೆನೆಯವರ ಮತ್ತು ತನ್ನ ಪೋಷಕರ ಜೊತೆ ಮಾತನಾಡಿ ಮದುವೆಗೆ ಒಪ್ಪಿಸಿದ್ದಾನೆ.
ಬಳಿಕ ರವಿರಾಜ್ 2021ರ ಮಾರ್ಚ್ 17 ರಂದು ರಾತ್ರಿ 8 ಗಂಟೆ ಸುಮಾರಿಗೆ ಸಂತ್ರಸ್ತೆ ಮನೆಗೆ ಹೋಗಿ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ತಾವು ಇಬ್ಬರೇ ಇರುವ ಖಾಸಗಿ ವಿಡಿಯೋವನ್ನು ಇಟ್ಟುಕೊಂಡು, ರವಿವಾರಜ್ ಬ್ಲ್ಯಾಕ್ಮೇಲ್ ಮಾಡಲು ಆರಂಭಿಸಿದ್ದಾರೆ. ನಂತರ ಅನೇಕ ಸಲ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಸಂತ್ರಸ್ತೆ ಗರ್ಭಿಣಿಯಾಗಿದ್ದಾಳೆ. ಆಗ, ರವಿರಾಜ್ ಗರ್ಭಪಾತ ಮಾಡಿಸಿದ್ದಾನೆ. ಬಳಿಕ ಸಂತ್ರಸ್ತೆ ಮದುವೆ ಮಾಡಿಕೊ ಎಂದು ದುಂಬಾಲು ಬಿದ್ದಿದ್ದಾಳೆ.