Sunday, March 23, 2025
Homeಧಾರ್ಮಿಕಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ

ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ

ಬೈಂದೂರಿನ ದೈವಜ್ಞ ಬ್ರಾಹ್ಮಣ ಸಮಾಜದ ಆರಾಧಿಸಿ ಪೂಜಿಸಿಕೊಂಡು ಬಂದಿರುವ ದೈವಜ್ಞ ಕೇರಿಯಲ್ಲಿರುವ ಶ್ರೀ ನಾಗಜಟ್ಟಿಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕುಂಭಾಭಿಷೇಕ ಮತ್ತು ಸ್ವಪರಿವಾರ ನಾಗಶಿಲಾ ಪ್ರತಿಷ್ಠೆ, ಆಶ್ಲೇಷ ಬಲಿ, ಹಾಗೂ ಸಪರಿವಾರ ಜಟ್ಟಿಗೇಶ್ವರ ದೈವದ ಪುನಃ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕವು ದಿನಾಂಕ 5 ಮತ್ತು 6.03. 2024ನೇ ಬುಧವಾರದಂದು ಜ್ಯೋತಿಷಿ ವಿದ್ವಾನ್ ಶ್ರೀ ವಾಸುದೇವ ಜೋಷಿ ಹಾಲಾಡಿ ಇವರ ನೇತೃತ್ವದಲ್ಲಿ ಜರುಗಿತು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆಗೆ ಸಹಸ್ರಾರು ಭಕ್ತರು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರವೀಂದ್ರ ಶೇಟ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು ,ಗೌರವ ಅಧ್ಯಕ್ಷರಾದ ಮುಖ್ಯ ಅತಿಥಿಗಳಾಗಿ ಮಂಜುನಾಥ್ ಶೇಟ್, ಶಂಕರನಾರಾಯಣ, ಯು. ನಾಗರಾಜ ಶೇಟ್ ಉಡುಪಿ, ಬಿ. ಎನ್ .ಸುಬ್ರಮಣ್ಯ ಶೇಟ್ ಬೆಂಗಳೂರು,ಪ್ರಶಾಂತ್ ಶೇಟ್ .ಮಂಗಳೂರು, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ನಾಗ ಜಟ್ಟಿಗೇಶ್ವರ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀನಿವಾಸ್ ಶೇಟ್ ಸ್ವಾಗತ ಕೋರಿ, ಜೀರ್ಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ವೇದಿಕೆಯಲ್ಲಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು ಮತ್ತು ಜೀರ್ಣೋದ್ಧಾರ ಸಮಿತಿಯ ಸದಸ್ಯರನ್ನು ಗೌರವಿಸಲಾಯಿತು. ಉಪಾಧ್ಯಕ್ಷರಾದ ರವೀಂದ್ರ ಶೇಟ್ , ನಿಶಾಂತ್ ಶೇಟ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೇಟ್, ಖಜಾಂಚಿ ವಿನಾಯಕ ಶೇಟ್ ,ವಲೀೢಶ್ ಶೇಟ್, ಬೆಂಗಳೂರು, ದಿನೇಶ್ ತಗ್ಗರ್ಸೆ, ಅರ್ಜುನ್ ಶೇಟ್ ಮಂಗಳೂರು, ನರೇಂದ್ರ ಶೇಟ್ ಬೈಂದೂರು, ವಿಮಲೇಟ್ ಶೇಟ್ ಮಂಗಳೂರು, ಕೀರ್ತಿರಾಜ್ ಶೇಟ್ ಬೈಂದೂರು, ಬಿ.ನಾಗರಾಜ್ ಶೇಟ್, ಬೈಂದೂರು ಅಶೋಕ್ ನಾಗೂರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಣೆಯನ್ನು ಕಾರ್ಯದರ್ಶಿಯಾದ ನವೀನ್ ಎನ್. ಶೇಟ್ ನಿರ್ವಹಿಸಿ ಧನ್ಯವಾದಗೈದರು ಸಭಾ ಕಾರ್ಯಕ್ರಮದ ನಂತರ ಸಂಗೀತ ಗಾನ ಸಂಭ್ರಮವನ್ನು ಯು .ನಾಗರಾಜ್ ಶೇಟ್ ಉಡುಪಿ ಅವರ ಬಳಗ ನಡೆಸಿಕೊಟ್ಟರು.

RELATED ARTICLES
- Advertisment -
Google search engine

Most Popular