Monday, March 17, 2025
Homeರಾಜ್ಯಬೆಟ್ಟದ ವ್ಯೂ ಪಾಯಿಂಟ್‌ನಲ್ಲಿ ರೀಲ್ಸ್‌ ಹುಚ್ಚಾಟ | ಬಿಸಿಮುಟ್ಟಿಸಿದ ಪೊಲೀಸರು

ಬೆಟ್ಟದ ವ್ಯೂ ಪಾಯಿಂಟ್‌ನಲ್ಲಿ ರೀಲ್ಸ್‌ ಹುಚ್ಚಾಟ | ಬಿಸಿಮುಟ್ಟಿಸಿದ ಪೊಲೀಸರು

ಚಿಕ್ಕಬಳ್ಳಾಪುರ: ತಾಲೂಕಿನ ಆವುಲಬೆಟ್ಟದ ವ್ಯೂ ಪಾಯಿಂಟ್‌ನಲ್ಲಿ ರೀಲ್ಸ್‌ ಮಾಡಿ ಹುಚ್ಚಾಟ ಮೆರೆದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಇನ್ನು ಮುಂದೆ ಯಾರೂ ಇಂತಹ ಹುಚ್ಚಾಟದ ಸಾಹಸಗಳನ್ನು ಮಾಡಬಾರದು ಎಂದು ವಿಡಿಯೋ ಮೂಲಕ ಹೇಳಿಸಿದ್ದಾರೆ.
ಅಕ್ಷಯ್‌ ಕುಮಾರ್‌ ಎಂಬಾತ ವ್ಯೂ ಪಾಯಿಂಟ್‌ನ ತುತ್ತ ತುದಿಯ ಅಪಾಯಕಾರಿ ಸ್ಥಳದಲ್ಲಿ ರೀಲ್ಸ್‌ ಮಾಡಿದ್ದ. ಇದನ್ನು ತನ್ನ ಇನ್ಸ್‌ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದ. ವ್ಯೂಪಾಯಿಂಟ್‌ ಸ್ಥಳದಲ್ಲಿ ಹೀಗೆ ರೀಲ್ಸ್‌ ಮಾಡುವವರು ಸಂಖ್ಯೆ ಹೆಚ್ಚುತ್ತಿರುವುದರಿಂದ ಪೊಲೀಸರು ಇಲ್ಲಿ ತಡೆಗೋಡೆ ನಿರ್ಮಿಸಿದ್ದಾರೆ.
ಪ್ರವಾಸಿ ತಾಣದಲ್ಲಿ ಅಪಾಯಕಾರಿಯಾದ ರೀತಿಯಲ್ಲಿ ರೀಲ್ಸ್‌ ಮಾಡುವುದು ಸರಿಯಲ್ಲ. ಇಂತಹ ಪ್ರಕರಣ ಕಂಡುಬಂದರೆ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ. ಪ್ರಕರಣ ದಾಖಲಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಶಾಲ್‌ ಚೌಕ್ಸೆ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular