ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲ್ಯಡ್ಕದಲ್ಲಿ ಆ. 28ರಂದು ಮುಂಜಾನೆ ಹೆದ್ದಾರಿ ಬದಿಯ ಕಾಂಕ್ರೀಟ್ ಚರಂಡಿಗೆ ಬಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ನೆಲಮಂಗಲ ನಿವಾಸಿ ಹುನಮಂತರಾಯಪ್ಪ (60) ಮೃತಪಟ್ಟವರು. ಅವರು ಆ. 27ರಂದು ರಾತ್ರಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿಯನ್ನು ಚಲಾಯಿಸಿಕೊಂಡು ಹೊರಟಿ ದ್ದರು. ರಾತ್ರಿ 1 ಗಂಟೆ ಸುಮಾರಿಗೆ ನೇಲ್ಯಡ್ಕದಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ರಸ್ತೆ ಬದಿಗೆ ಹೋದಾಗ ಆಕಸ್ಮಿಕವಾಗಿ ಕಾಮಗಾರಿ ನಡೆಯುತ್ತಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದರು. ಸಾರ್ವಜನಿಕರು ಗಮನಿಸಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಮೃತರ ಪುತ್ರ ರಾಜಶೇಖರ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.